BengaluruCrime

ಪ್ರವೀಣ್‌ ಕೊಲೆ ಪ್ರಕರಣ; ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ – ಆರಗ ಜ್ಞಾನೇಂದ್ರ

ಬೆಂಗಳೂರು; ಹಿಂದೂ ಸಂಘಟನೆ ಮುಖಂಡ ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಹತ್ತು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಅವರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಶೀಘ್ರದಲ್ಲೇ ಪ್ರಕರಣವನ್ನು ಭೇದಿಸುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಸಿಎಂ ಜೊತೆಗಿನ ಸಭೆ ಬಳಿಕೆ ಮಾತನಾಡಿದ ಅವರು, ಸ್ಥಳದಲ್ಲಿ ಈಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಪ್ರವೀಣ್‌ ಕೊಲೆಗಾರರನ್ನು ಬಿಡುವುದಿಲ್ಲ ಎಂದು ಹೇಳಿದರು.

Share Post