BengaluruPolitics

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗೆ ಟಿಕೆಟ್ ಘೋಷಣೆ

ಮಂಗಳೂರು; ಬಿಜೆಪಿ ಕಾರ್ಯಕರ್ತರ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗೆ ಎಸ್ ಡಿ ಪಿ ಐ ವಿಧಾನಸಭಾ ಚುನಾವಣೆ ಟಿಕೆಟ್ ಘೋಷಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೊಪಿ ಶಾಫಿ ಬೆಳ್ಳಾರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಎಸ್ ಡಿ ಪಿ ಐ ಟಿಕೆಟ್ ನಿಡೋದಾಗಿ ಘೋಷಣೆ ಮಾಡಲಾಗಿದೆ. ಎಸ್ ಡಿ ಪಿ ಐ ನ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಖಾನ್ ಟಿಕೆಟ್ ಘೋಷಣೆ ಮಾಡಿದ್ದಾರೆ.

ಎಸ್ ಡಿ ಪಿ ಐ ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಶಾಫಿ ಬೆಳ್ಳಾರೆಯನ್ನ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎನ್ ಐ ಎ ಬಂದಿಸಿದೆ. ಇದೀಗ ಎಸ್ ಡಿ ಪಿ ಐ ಟಿಕೆಟ್ ಘೋಷಣೆ ಮಾಡಿದ್ದು ಶಾಫಿ ಬೆಳ್ಳಾರೆ ಜೈಲಿನಿಂದಲೇ ಸ್ಪರ್ಧಿಸುತ್ತಿದ್ದಾನೆ ಎನ್ನಲಾಗಿದೆ.

Share Post