BengaluruCrime

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ; ಕೊಲೆ ಮಾಡಿದ್ದು ಕೇರಳದವರಲ್ಲ – ಆರಗ ಜ್ಞಾನೇಂದ್ರ

ಬೆಂಗಳೂರು; ಹಿಂದೂಪರ ಸಂಘಟನೆ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಮಾಡಿದವರು ಕೇರಳದವರಲ್ಲ. ಸ್ಥಳೀಯರೇ ಕೊಲೆ ಮಾಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಖಾಸಗಿ ವಾಹಿನಿಗೆ ಸಂದರ್ಶನ ನೀಡಿರುವ ಅವರು, ಕೇರಳದಿಂದ ಬಂದು ಪ್ರವೀಣ್‌ ಕೊಲೆ ಮಾಡಿದ್ದಾರೆ ಎಂದು ಅಂದುಕೊಂಡಿದ್ದೆವು. ಆದ್ರೆ ಸ್ಥಳೀಯರೇ ಕೊಲೆ ಮಾಡಿದ್ದಾರೆ ಎಂದು ತನಿಖೆಯಿಂದ ಗೊತ್ತಾಗಿದೆ ಎಂದರು.

ಬೆಳ್ಳಾರೆಯಲ್ಲಿ ಚಿಕನ್‌ ಅಂಗಡಿ ನಡೆಸುತ್ತಿದ್ದ ಪ್ರವೀಣ್‌ ನೆಟ್ಟಾರು ಅವರನ್ನು ಇತ್ತೀಚೆಗೆ ಕೊಲೆ ಮಾಡಲಾಗಿತ್ತು. ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದು ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಬೈಕ್‌ ಸಂಖ್ಯೆ ಕೇರಳದ್ದಾದ್ದರಿಂದ, ಕೇರಳದವರು ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿತ್ತು.

Share Post