Bengaluru

ಸಿದ್ದರಾಮೋತ್ಸವಕ್ಕೆ ಸಿದ್ಧತೆ; ಪೂರ್ವಭಾವಿ ಸಭೆಗೆ ಡಿ.ಕೆ.ಶಿವಕುಮಾರ್‌ ಗೈರು

ಬೆಂಗಳೂರು; ಸಿದ್ದರಾಮಯ್ಯ ಅವರು ಎಪ್ಪತೈದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಸಿದ್ದರಾಮೋತ್ಸವ ಆಯೋಜಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಕೈಪಡೆ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪಾಲ್ಗೊಂಡಿಲ್ಲ. ಹೀಗಾಗಿ, ಈ ಬಗ್ಗೆ ಅಪಸ್ವರಗಳು ಕೇಳಿಬರುತ್ತಿವೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಬಣದ ನಡುವೆ ಸಾಮರಸ್ಯವಿಲ್ಲ ಎಂಬ ಮಾತುಗಳು ಹೆಚ್ಚಾಗುತ್ತಿವೆ. ಆದ್ರೆ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಿತಿ ಇದನ್ನು ಅಲ್ಲಗೆಳೆದಿದೆ. ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್‌ ಅವರೇ ಮುಖ್ಯ ಅತಿಥಿ. ಹೀಗಾಗಿ, ಪೂರ್ವಭಾವಿ ಸಭೆಗೆ ಅವರನ್ನು ಆಹ್ವಾನಿಸಿಲ್ಲ ಎಂದು ಹೇಳಿದ್ದಾರೆ.

ಇನ್ನೊಂದೆಡೆ ಸಿದ್ದರಾಮಯ್ಯ ಅವರಿಗೆ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರಿಗೆ ಶಿವಕುಮಾರೋತ್ಸವ ಮಾಡಬೇಕು ಎಂದು ಡಿ.ಕೆ.ಶಿವಕುಮಾರ್‌ ಬೆಂಬಲಿಗ ಜಿ.ಸಿ.ರಾಜು ಅವರು ಪತ್ರ ಬರೆದಿದ್ದಾರೆ. ಸೋನಿಯಾಗಾಂಧಿ, ರಾಹುಲ್‌ ಗಾಂಧಿಗೆ ಈ ಬಗ್ಗೆ ಪತ್ರ ಬರೆಯಲಾಗಿದೆ. ಇನ್ನೊಂದೆಡೆ ಸಿದ್ದರಾಮಯ್ಯ ಅಮೃತ ಮಹೋತ್ಸವ ಆಚರಣೆ ಸಮಿತಿಗೂ ಈ ಪತ್ರ ನೀಡಲಾಗಿದೆ. ಇವತ್ತಿನ ಸಭೆಯಲ್ಲೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕೆಂದು ಆಗ್ರಹಿಸಲಾಗಿದೆ.

 

Share Post