BengaluruPolitics

ಲೋಕಸಭಾ ಚುನಾವಣೆಗೆ ಸಿದ್ಧತೆ; ನಾಳೆ ಹೈಕಮಾಂಡ್‌ ಜೊತೆ ದೆಹಲಿಯಲ್ಲಿ ಚರ್ಚೆ – ಡಿಕೆಶಿ

ಬೆಂಗಳೂರು; ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ದೆಹಲಿಯಲ್ಲಿ ಹೈಕಮಾಂಡ್‌ ಜೊತೆ ಮೂರು ಹಂತದ ಸಭೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷ ಸಂಘಟನೆ ಹಾಗೂ ಇನ್ನಿತರ ವಿಚಾರವಾಗಿ ಹೈಕಮಾಂಡ್‌ ನಾಯಕರ ಜೊತೆ ನಾವು ಚರ್ಚೆ ನಡೆಸಲಿದ್ದೇವೆ ಎಂದು ಹೇಳಿದರು.

ನಾಳೆ ದೆಹಲಿಯಲ್ಲಿ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಾವು ದೆಹಲಿಗೆ ಹೋಗುತ್ತಿದ್ದೇವೆ. ಹಿರಿಯ ನಾಯಕರು, ಶಾಸಕರು, ಸಂಸದರನ್ನು ಕೂಡಾ ನಾಳಿನ ಸಭೆಗೆ ಕರೆದಿದ್ದೇವೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಸಭೆಗಳು ನಡೆಯಲಿವೆ. ಸಭೆಯಲ್ಲಿ ಎಲ್ಲವೂ ನಿರ್ಧಾರವಾಗಲಿವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ಇನ್ನ ಉ ನಾವು ಗ್ಯಾರೆಂಟಿಗಳನ್ನು ಜಾರಿ ಮಾಡಿದ್ದೇವೆ. ಹೇಳಿದಂತೆ ನಡೆಯುತ್ತಿದ್ದೇವೆ. ನಮ್ಮ ಯೋಜನೆಗಳು ಜನರಿಗೆ ತಲುಪುತ್ತಿವೆಯೇ ಇಲ್ಲವೇ ಎಂಬುದರ ಬಗ್ಗೆ ಚರ್ಚೆ ನಡೆಯಲಿದೆ ಎಂದೂ ಡಿ.ಕೆ.ಶಿವಕುಮಾರ್‌ ಹೇಳಿದರು.

Share Post