Bengaluru

ಖಾಸಗಿ ಸಾರಿಗೆ ಮುಷ್ಕರ ರಾಜಕೀಯ ಪ್ರೇರಿತ; ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು; ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಮುಷ್ಕರ ನಡೆಯುತ್ತಿದೆ. ಅದು ರಾಜಕೀಯ ಪ್ರೇರಿತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮುಷ್ಕರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಅವರು ಪ್ರತಿಭಟನೆ ಮಾಡಲಿ ಎಂದಿದ್ದಾರೆ.

ಶಕ್ತಿ ಯೋಜನೆಯಿಂದಾಗಿ ಖಾಸಗಿ ಬಸ್‌ ನವರಿಗೆ ತೊಂದರೆಯಾಗಿರುವುದು ನಿಜ. ಉಚಿತ ಯೋಜನೆಯಿಂದಾಗಿ ಖಾಸಗಿ ಬಸ್​​​​​, ಆಟೋ ಚಾಲಕರಿಗೆ ಸ್ವಲ್ಪ ಸಮಸ್ಯೆ ಆಗಿದೆ. ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇವೆ. ಆದ್ರೆ ಓಲಾ, ಉಬರ್​​​ ವಾಹನದವರ ಮುಷ್ಕರ ರಾಜಕೀಯ ಪ್ರೇರಿತ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ಖಾಸಗಿ ಸಾರಿಗೆ ಒಕ್ಕೂಟಕ್ಕೆ ಹೋರಾಟ ಮಾಡುವ ಹಕ್ಕಿದೆ. ಹೀಗಾಗಿ, ಅವರು ಮುಷ್ಕರ ನಡೆಸುತ್ತಿದ್ದಾರೆ. ನಡೆಸಲಿ ಎಂದು ಹೇಳಿದರು.

Share Post