BengaluruCrime

ಡಿ.ಕೆ.ಶಿವಕುಮಾರ್‌ ವಿರುದ್ಧದ ತನಿಖೆಗೆ ಮಧ್ಯಂತರ ರಡೆ

ಬೆಂಗಳೂರು; ಅಕ್ರಮ ಆಸ್ತಿ ಗಳಿಸಿದ ಆರೋಪ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ರಿಲೀಫ್‌ ಸಿಕ್ಕಿದೆ. ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ಇದೇ 24ರವರೆಗೆ ಮಧ್ಯಂತರ ತಡೆ‌ ನೀಡಿದೆ.

ಈ ಸಂಬಂಧ ಡಿ.ಕೆ.ಶಿವಕುಮಾರ್ ರಿಟ್‌ ಅರ್ಜಿ ಸಲ್ಲಿಸಿದ್ದರು. ಡಿಕೆಶಿ ಪರ ಹಿರಿಯ ವಕೀಲ ಸಿ.ಎಚ್.ಜಾಧವ್‌, ಡಿ.ಕೆ.ಶಿವಕುಮಾರ್‌ ಅವರು ಸಾರ್ವಜನಿಕ ಸೇವಕರಿದ್ದಾರೆ. ಅವರ ಕುಟುಂಬದ ಸದಸ್ಯರನ್ನೂ ಈ ಪ್ರಕರಣದಲ್ಲಿ ಸಿಲುಕಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿದರು. ಚುನಾವಣೆ ಹತ್ತಿರದಲ್ಲಿದೆ. ಈ ಕಾರಣಕ್ಕಾಗಿಯೇ ನಿತ್ಯ ಅವರಿಗೆ ವಿಚಾರಣೆ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ವಕೀಲರು ಹೇಳಿದರು. ಆದ್ರೆ ಇದಕ್ಕೆ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್ ಜಾಧವ್ ಅವರ ವಾದವನ್ನು ಬಲವಾಗಿ ಅಲ್ಲಗಳೆದರು. ಆದ್ರೆ ಕೋರ್ಟ್‌ ಇದಕ್ಕೆ ಸೊಪ್ಪು ಹಾಕದೇ ವಿಚಾರಣೆಯನ್ನು ಇದೇ ೨೪ಕ್ಕೆ ಮುಂದೂಡಿದೆ.

Share Post