BengaluruCinema

ಪುನೀತ್‌ ರಸ್ತೆ ನಾಮಕರಣ ಸಮಾರಂಭ; ಫ್ಲೆಕ್ಸ್‌ನಲ್ಲಿ ನಟನ ಫೋಟೋನೇ ಇಲ್ಲ..!!

ಬೆಂಗಳೂರು; ಇವತ್ತು ಬೆಂಗಳೂರಿನ ಮೈಸೂರು ರಸ್ತೆಯಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಪುನೀತ್‌ ರಾಜ್‌ ಕುಮಾರ್‌ ಹೆಸರನ್ನು ನಾಮಕರಣ ಮಾಡಲಾಗುತ್ತಿದೆ. ಸ್ವತಃ ಸಿಎಂ ಬಸವರಾಜ ಬೊಮ್ಮಾಯಿಯವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಆದ್ರೆ ಈ ಕಾರ್ಯಕ್ರಮಕ್ಕಾಗಿ ಹಾಕಿರುವ ಫ್ಲೆಕ್ಸ್‌ನಲ್ಲಿ ರಾಜಕಾರಣಿಗಳೆಲ್ಲರ ಫೋಟೋಗಳಿವೆ. ಆದ್ರೆ ಪುನೀತ್‌ ರಾಜ್‌ ಕುಮಾರ್‌ ಅವರ ಫೋಟೋನೇ ಕಾಣುತ್ತಿಲ್ಲ. ಇದು ತೀವ್ರ ಟೀಕೆಗೆ ಗುರಿಯಾಗಿದೆ.

 

ಮೈಸೂರು ರಸ್ತೆಯಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಪುನೀತ್ ಹೆಸರು ಇಡುವ ಪ್ರಸ್ತಾವನೆಗೆ ಬಿಬಿಎಂಪಿ ಇತ್ತೀಚೆಗೆ ಒಪ್ಪಿಗೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದಕ್ಕಾಗಿ ದೊಡ್ಡ ಫ್ಲೆಕ್ಸ್‌ ಒಂದನ್ನು ಹಾಕಲಾಗಿದೆ. ಇದ್ರಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಿಎಂ ಬೊಮ್ಮಾಯಿ, ಸಂಸದ ತೇಜಸ್ವಿ ಸೂರ್ಯ, ಸಚಿವ ಆರ್‌.ಅಶೋಕ್‌ ಅವರ ಫೋಟೋಗಳನ್ನು ಮುದ್ರಿಸಲಾಗಿದೆ. ಆದ್ರೆ ಪುನೀತ್‌ ರಾಜ್‌ಕುಮಾರ್‌ ಅವರ ಫೋಟೋ ಮಾತ್ರ ಇಲ್ಲ.

 

ಇಂದು ಸಂಜೆ 6 ಗಂಟೆಗೆ ಪದ್ಮನಾಭನಗರದಲ್ಲಿ ಈ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಸ್ತೆಯನ್ನು ಉದ್ಘಾಟನೆ ಮಾಡಲಿದ್ದಾರೆ. ‘ಬಾನದಾರಿಯಲ್ಲಿ ಪುನೀತ್ ಪಯಣ’ ಅಂತ ಈ ಕಾರ್ಯಕ್ರಮಕ್ಕೆ ಹೆಸರಿಡಲಾಗಿದೆ.

Share Post