BengaluruPolitics

ರಾಜ್ಯದಲ್ಲಿ ರಾಹುಲ್‌ ಹಾಗೂ ಪ್ರಿಯಾಂಕ ಅಬ್ಬರ; ಎಲ್ಲೆಲ್ಲಿ ಕ್ಯಾಂಪೇನ್‌..?

ಬೆಂಗಳೂರು; ಕರ್ನಾಟಕ ವಿಧಾನಸಭಾ ಚುನಾವಣೆ ರಂಗೇರುತ್ತಿದೆ. ಕೇಂದ್ರದ ನಾಯಕರು ರಾಜ್ಯದಲ್ಲಿ ಪ್ರಚಾರ ನಡೆಸಲು ಅಣಿಯಾಗುತ್ತಿದ್ದಾರೆ. ಈಗಾಗಲೇ ಬಿಜೆಪಿ ಪರ ಪ್ರಚಾರ ನಡೆಸಲು ಮೋದಿ ಹಾಗೂ ಅಮಿತ್‌ ಶಾ ರೂಟ್‌ ಮ್ಯಾಪ್‌ ರೆಡಿಯಾಗಿದೆ. ಇತ್ತ ಕಾಂಗ್ರೆಸ್‌ ನಾಯಕರು ಕೂಡಾ ತಮ್ಮ ವರಿಷ್ಠರನ್ನು ಕರೆತರಲು ಸಿದ್ಧತೆ ನಡೆಸಿದ್ದಾರೆ. ರಾಹುಲ್‌ ಗಾಂಧಿಯವರು ಏಪ್ರಿಲ್‌ 23ಕ್ಕೆ ರಾಜ್ಯಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದರ ಜೊತೆಗೆ ಮೇ ನಾಲ್ಕರಂದು ಮಧ್ಯಕರ್ನಾಟಕದಲ್ಲಿ ಕಾಂಗ್ರೆಸ್‌ ಬೃಹತ್‌ ಸಮಾವೇಶ ನಡೆಯಲಿದೆ. ಇದರಲ್ಲಿ ರಾಹುಲ್‌ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಇನ್ನು ಏಪ್ರಿಲ್‌ ಕೊನೆಯ ವಾರದಲ್ಲಿ ಪ್ರಿಯಾಂಕಾ ಗಾಂಧಿ ಕೂಡಾ ರಾಜ್ಯಕ್ಕೆ ಆಗಮಿಸಲಿದ್ದು, ಹಲವು ಪ್ರಚಾರ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ.

Share Post