BengaluruPolitics

ಸಿದ್ದರಾಮಯ್ಯ ಅವರಿಗೆ ರಾಹುಲ್‌ ಯಾವ ಸೂಚನೆಯೂ ಕೊಟ್ಟಿಲ್ಲ; ಡಿ.ಕೆ.ಸುರೇಶ್‌

ಬೆಂಗಳೂರು; ಸಿದ್ದರಾಮಯ್ಯ ಅವರ ಸ್ಪರ್ಧೆ ಬಗ್ಗೆ ಹೈಕಮಾಂಡ್‌ ಯಾವುದೇ ಸೂಚನೆ ಕೊಟ್ಟಿಲ್ಲ. ಸಿದ್ದರಾಮಯ್ಯ ಅವರು ಎಲ್ಲಿ ಕೇಳಿದರೂ ಹೈಕಮಾಂಡ್‌ ಟಿಕೆಟ್‌ ನೀಡುತ್ತದೆ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೋಲಾರದಲ್ಲಿ ಸ್ಪರ್ಧೆ ಮಾಡಬೇಡಿ ಎಂದು ರಾಹುಲ್‌ ಗಾಂಧಿ ಯಾವ ಸೂಚನೆಯನ್ನೂ ಕೊಟ್ಟಿಲ್ಲ. ಈ ಬಗ್ಗೆ ಚರ್ಚೆಯೇ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪರವಾದಂತಹ ವಾತಾವರಣವಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಅಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಅವರು ಎಲ್ಲಿ ಟಿಕೆಟ್‌ ಕೇಳಿದರೂ ಹೈಕಮಾಂಡ್‌ ಅವರಿಗೆ ಟಿಕೆಟ್‌ ಕೊಡುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಡಿ.ಕೆ.ಸುರೇಶ್‌ ಸಷ್ಟಪಡಿಸಿದ್ದಾರೆ.

Share Post