Bengaluru

ನಾಳೆಯಿಂದ ಬೆಂಗಳೂರಿನಲ್ಲಿ ಮಳೆ; ರಾಜ್ಯದಲ್ಲಿ ಎಲ್ಲೆಲ್ಲಿ ವರುಣನ ಆರ್ಭಟ?

ಬೆಂಗಳೂರು; ಬಿಸಿಲಿಗೆ ಬೆಂಗಳೂರಿನ ಜನ ತತ್ತರಿಸಿಹೋಗಿದ್ದಾರೆ.. ಸ್ವಲ್ಪ ಮಳೆಯಾದರೂ ಬಂದರೆ ಸಾಕು ಎಂದು ಕಾಯುತ್ತಿದ್ದಾರೆ.. ಇದೀಗ ಬೆಂಗಳೂರಿನ ಜನಕ್ಕೆ ಗುಡ್‌ ನ್ಯೂಸ್‌ ಸಿಕ್ಕಿದೆ… ನಾಳೆಯಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ.. ಬೆಂಗಳೂರು ಅಷ್ಟೇ ಅಲ್ಲದೆ ರಾಜ್ಯದ ಎಲ್ಲಾ ಭಾಗಗಳಲ್ಲೂ ಮಳೆಯಾಗಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ;ಮೋದಿ ಬೆಂಗಳೂರು ರೋಡ್‌ ಶೋ ರದ್ದು; ಮಂಗಳೂರು ಸಮಾವೇಶವೂ ಇಲ್ಲ!

ಯುಗಾದಿಯ ನಂತರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿತ್ತು.. ಏಪ್ರಿಲ್‌ 13 ಮತ್ತು 14ರಂದು ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿತ್ತು.. ಆದ್ರೆ ನಾಳೆಯಿಂದಲೇ ಬೆಂಗಳೂರಿನಲ್ಲಿ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.. ಜೊತೆಗೆ ರಾಜ್ಯಾದ್ಯಂತ ಮಳೆಯ ಸಿಂಚನವಾಗಲಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.. ಕೋಲಾರ, ತುಮಕೂರು, ಕೊಡಗು, ಚಿಕ್ಕಮಗಳೂರು, ಮೈಸೂರು, ಧಾರವಾಡ, ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ಬೀದರ್ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಜೋರು ಮಳೆ ಸುರಿಯಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ; ಎಮರ್ಜೆನ್ಸಿ ಅಂತೇಳಿ ಹೋದ ಉದ್ಯೋಗಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಕಂಡಳು!

Share Post