Bengaluru

ರಾಜಭವನದಲ್ಲಿ ಸಂಕ್ರಾಂತಿ ಸಂಭ್ರಮ: ಗೋವುಗಳಿಗೆ ಪೂಜೆ ಸಲ್ಲಿಕೆ

ಬೆಂಗಳೂರು: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿ ಹಬ್ಬ ಆಚರಣೆ ಮಾಡಿದ್ದಾರೆ. ಗೋಮಾತೆಗೆ ಹೂವಿನಿಂದ ಸಿಂಗರಿಸಿ ಹಣ್ಣು ಫಲಹಾರ ನೀಡಿ ಕೈ ಮುಗಿದು ಆಶೀರ್ವಾದ ಪಡೆದ್ರು.

ಪೂಜೆ ಸಲ್ಲಿಕೆ ಬಳಿಕ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ರು.  ದೇವರು ಆರೋಗ್ಯ, ಆಯಸ್ಸು ಮತ್ತು ಶಾಂತಿಯನ್ನು ನೀಡಿ  ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ, ಕೋವಿಡ್ ಮಹಾಮಾರಿ ಹಾವಳಿ ಇರುವುದರಿಂದ ನಾಗರಿಕರು ಸರ್ಕಾರದ ಮಾರ್ಗಸೂಚಿ ಗಳನ್ನು ಪಾಲಿಸಿ, ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.

Share Post