Bengaluru

ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪತ್ನಿ ನಿಧನ

ಬೆಂಗಳೂರು: ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ, ಲೇಖಕಿ ರಾಜೇಶ್ವರಿ ತೇಜಸ್ವಿ (84) ಅವರು ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ನಿಧನ ಹೊಂದಿದರು. ನಗರದ ಎಚ್‌ ಎಸ್‌ ಆರ್‌ ಲೇಔಟ್‌ನಲ್ಲಿ ತಮ್ಮ ಪುತ್ರಿಯ ನಿವಾಸದಲ್ಲಿ ನಿಧನ ಹೊಂದಿದರು. ಅವರು ಅನಾರೋಗ್ಯದ ಹಿನ್ನೆಲೆಯಿಂದ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ನನ್ನ ತೇಜಸ್ವಿ ಅವರ ಮೊಟ್ಟ ಮೊದಲ ಪುಸ್ತಕ. ನಮ್ಮ ಮನೆಗೂ ಬಂದರು ಗಾಂಧೀಜಿ ಸೇರಿದಂತೆ ಕೆಲ ಕೃತಿ ರಚಿಸಿದ್ದಾರೆ.
ಇಂದು ಸಂಜೆವರೆಗೆ ಎಚ್ಎಸ್‌ಆರ್‌ಲೇಔಟ್‌ನ ಪುತ್ರಿಯ ನಿವಾಸದಲ್ಲಿ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ನಂತರ ದೇಹದಾನ ಮಾಡಲು ನಿರ್ಧರಿಸಲಾಗಿದೆ.

Share Post