Bengaluru

ರಾಜಕಾಲುವೆ ಒತ್ತುವರಿ ವಿಚಾರ; ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಸಿಎಂ

ಬೆಂಗಳೂರು; ನಿಮ್ಮ ಕಾಲದಲ್ಲಿ ರಾಜ ಕಾಲುವೆಗಳ ಅಭಿವೃದ್ಧಿಯಾಗಿರಲಿಲ್ಲ. ಹೀಗಾಗಿಯೇ ಬೆಂಗಳೂರಿನಲ್ಲಿ ಈ ಪರಿಸ್ಥಿತಿ ಬರಲು ಕಾರಣ ಎಂದು ಕಾಂಗ್ರೆಸ್‌ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರ ಬಗ್ಗೆ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಸಿಎಂ, ನಿಮ್ಮ ಕಾಲದಲ್ಲಿ ಆದ ಅವಾಂತರದಿಂದಲೇ ಈಗ ಈ ಪರಿಸ್ಥಿತಿ ಬಂದಿದೆ ಎಂದರು.

ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಿ ರಾಜಕಾಲುವೆಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ, ೮೫೯ ಕಿಲೋ ಮೀಟರ್‌ ರಾಜಕಾಲುವೆಗಳನ್ನು ಅಭಿವೃದ್ಧಿ ಮಾಡುತ್ತಿದ್ದೇವೆ. ಇದಕ್ಕಾಗಿ 300 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡಲಾಗುತ್ತಿದೆ ಎಂದು ಹೇಳಿದರು. ರಾಜಕಾಲುವೆ ಒತ್ತುವರಿ ಮಾಡಿಕೊಂಡವರು ಯಾರೇ ಆದರೂ, ತೆರವು ಮಾಡೇ ಮಾಡುತ್ತೇವೆ ಎಂದು ಸಿಎಂ ಇದೇ ವೇಳೆ ಖಡಕ್‌ ಆಗಿ ಹೇಳಿದರು.

Share Post