BengaluruPolitics

ಹೆಚ್‌.ಡಿ.ರೇವಣ್ಣ ಮತ ಅಸಿಂಧುಗೊಳಿಸಲು ಬಿಜೆಪಿ ದೂರು

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರ ಮತವನ್ನು ಅಸಿಂಧುಗೊಳಿಸುವಂತೆ ಚುನಾವಣಾಧಿಕಾರಿ ಮುಂದೆ ಬಿಜೆಪಿ ಬೇಡಿಕೆ ಇಟ್ಟಿದೆ.

ರೇವಣ್ಣ ಅವರು ಮತ ಚಲಾಯಿಸಿದ ಬಳಿಕ ಮತಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ಶಿವಕುಮಾರ್ ಅವರಿಗೆ ತೋರಿಸಿದ್ದರು. ಅನ್ಯ ಪಕ್ಷದ ನಾಯಕರಿಗೆ ಮತಪತ್ರ ತೋರಿಸಿದ ಕಾರಣಕ್ಕಾಗಿ ರೇವಣ್ಣ ಅವರ ಮತವನ್ನು ಅಸಿಂಧುಗೊಳಿಸುವಂತೆ ವಿಧಾನಸಭೆಯ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಎಂ. ಸತೀಶ್ ರೆಡ್ಡಿ ಅವರು ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ದೂರು ನೀಡಿದ್ದಾರೆ.

Share Post