BengaluruPolitics

ರಾಜ್ಯಸಭಾ ಚುನಾವಣೆ; ನಾವು ನಾಮಪತ್ರ ಹಿಂಪಡೆಯಲ್ಲ; ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು; ರಾಜ್ಯಸಭಾ ಚುನಾವಣೆಯಲ್ಲಿ ನಾವು ಎರಡು ಸ್ಥಾನ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಈ ಕಾರಣಕ್ಕಾಗಿಯೇ ಎಡರನೇ ಸ್ಥಾನಕ್ಕಾಗಿ ಮನ್ಸೂರ್‌ ಅಲಿ ಖಾನ್‌ ಅವರನ್ನು ಕಣಕ್ಕಿಳಿಸಿದ್ದೇವೆ. ನಾವು ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೆ ಬೇರೆ ಬೇರೆ ಮತ ಬರಲಿದೆ. ಅದು ಹೇಗೆ ಎಂದು ನಾನು ಈಗ ಹೇಳುವುದಿಲ್ಲ. ನಮ್ಮ ಎರಡನೇ ಅಭ್ಯರ್ಥಿ ಕೂಡಾ ಗೆಲ್ಲುತ್ತಾರೆಂಬ ವಿಶ್ವಾಸ ನಮಗಿದೆ. ಇದಕ್ಕಾಗಿಯೇ ಅಭ್ಯರ್ಥಿ ಹಾಕಿದ್ದೇವೆ ಎಂದು ಹೇಳಿದರು.

 

Share Post