Bengaluru

ರಂಗೇರಿದ ಬೆಳಗಾವಿ ರಾಜಕೀಯ: ಸಿಎಂ ಭೇಟಿಯಾದ ರಮೇಶ್‌ ಜಾರಕಿಹೊಳಿ

ಬೆಂಗಳೂರು: ಉಮೇಶ್‌ ಕತ್ತಿ ನೇತೃತ್ವದಲ್ಲಿ ಕೆಲ ಬಿಜೆಪಿ ನಾಯಕರ ಗುಂಪು ಸಿಎಂ ಭೇಟಿಯಾಗಿ ಮಾತುಕತೆ ನಡೆಸಿದ ಬೆನ್ನಲ್ಲೇ ಬೆಳಗಾವಿ ಸಾಹುಕಾರ್‌ ರಮೇಶ್‌ ಜಾರಕಿಹೊಳಿ ಫುಲ್‌ ಅಲರ್ಟ್‌ ಆಗಿದ್ದಾರೆ. ಇಂದು ರಮೇಶ್‌ ಜಾರಕಿಹೊಳಿಯವರು ಬೆಂಗಳೂರಿನ ಆರ್‌.ಟಿ.ನಗರದ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಮೂಲ ಹಾಗೂ ವಲಸಿಗ ಬಿಜೆಪಿಗರ ನಡುವೆ ತಿಕ್ಕಾಟ ನಡೆದಿದೆ. ಸಚಿವ ಉಮೇಶ್‌ ಕತ್ತಿ ನೇತೃತ್ವದಲ್ಲಿ ಇತ್ತೀಚೆಗೆ ಸಭೆ ನಡೆಸಲಾಗಿತ್ತು. ಈ ಸಭೆಗೆ ಜಾರಕಿಹೊಳಿ ಸಹೋದರರಿಗೆ ಆಹ್ವಾನ ನೀಡಿರಲಿಲ್ಲ. ಇದು ಜಾರಕಿಹೊಳಿ ಸಹೋದರರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆನ್ನಲ್ಲೇ ಉಮೇಶ್‌ ಕತ್ತಿ ಹಾಗೂ ಹಲವು ಬಿಜೆಪಿ ನಾಯಕರು ಸಿಎಂ ಬೊಮ್ಮಾಯಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ವೇಳೆ, ಜಾರಕಿಹೊಳಿ ಸಹೋದರರ ವಿರುದ್ಧ ಕತ್ತಿ ದೂರು ನೀಡಿದ್ದಾರೆ ಎಂದು ಹೇಳಲಾಗಿತ್ತು.

ಈ ಬಗ್ಗೆ ಚರ್ಚೆಗಳು ಜೋರಾಗುತ್ತಿದ್ದಂತೆ ರಮೇಶ್‌ ಜಾರಕಿಹೊಳಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಮಾತುಕತೆ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

Share Post