BengaluruPolitics

ಕುರುಬ ಸಮುದಾಯವನ್ನು STಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು

ಬೆಂಗಳೂರು; 2A ಮೀಸಲಾತಿ ಅಡಿಯಲ್ಲಿ ಬರುವ ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸುವಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದು, ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ಪತ್ರ ಬರೆದಿದ್ದಾರೆ.

ಈ ಹಿಂದೆ ಕೇಂದ್ರ ಸರ್ಕಾರ ಕಾಡುಕುರುಬರನ್ನು ಎಸ್‌ಟಿಗೆ ಸೇರಿಸಿ ಆದೇಶ ಹೊರಡಿಸಿತ್ತು. ಇದೀಗ ಎಲ್ಲಾ ಕುರುಬರನ್ನೂ ಎಸ್‌ಟಿಗೆ ಸೇರಿಸಲು ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ಕುರುಬ ಸಮುದಾಯದ ಶ್ರೀಗಳು ಕಾಗಿನೆಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿ ಎಸ್‌ಟಿಗೆ ಸೇರಿಸುವಂತೆ ಒತ್ತಾಯ ಮಾಡಿದ್ದರು.

ಇದೀಗ ರಾಜ್ಯ ಸರ್ಕಾರ ಇದಕ್ಕೆ ಒಪ್ಪಿಗೆ ಸೂಚಿಸಿದ್ದು, ಕೇಂದ್ರಕ್ಕೆ ಶಿಫಾರಸು ಮಾಡಿದೆ.

 

Share Post