BengaluruPolitics

ಶಕ್ತಿ ಯೋಜನೆಯಿಂದ ಸಮಸ್ಯೆಯಾಗಿದ್ದರೆ ಆಟೋ ಚಾಲಕರಿಗೆ ಪರಿಹಾರ

ಬೆಂಗಳೂರು; ರಾಜ್ಯ ಸರ್ಕಾರ ಜಾರಿ ಮಾಡಿರುವ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದ ಆಟೋ ಚಾಲಕರಿಗೆ ಸಮಸ್ಯೆಯಾದರೆ, ಸರ್ಕಾರ ಅವರ ನೆರವಿಗೆ ಬರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್‌ ಸದಸ್ಯ ಭೋಜೇಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, ಸಮಸ್ಯೆಯಾಗಿದ್ದರೆ ಸರ್ಕಾರ ಆಟೋ ಚಾಲಕರಿಗೆ ನೆರವಾಗಲಿದೆ ಎಂದು ಹೇಳಿದ್ದಾರೆ.

ಶಕ್ತಿ ಯೋಜನೆಯಿಂದ ಯಾರೂ ಆಟೋ ಹತ್ತುತ್ತಿಲ್ಲ. ಆಟಟೋ ಚಾಲಕರಿಗೆ ತೊಂದರೆಯಾಗಿದೆ ಎಂದು ಜೆಡಿಎಸ್‌ ಸದಸ್ಯರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಆಟೋ ಚಾಲಕರಿಗೆ ಏನು ಸಮಸ್ಯೆಯಾಗಿದೆ ಎಂದು ಮೊದಲು ತಿಳಿಯೋಣ. ಈವರೆಗೂ ಯಾವುದೇ ಆಟೋ ಚಾಲಕರ ಸಂಘದವರು ಈ ಬಗ್ಗೆ ಮನವಿ ಮಾಡಿಲ್ಲ. ಒಂದು ತಿಂಗಳು ಮುಗಿಯಲಿ. ಆಟೋದವರು ತೊಂದರೆಯಾಗುತ್ತಿದೆ ಎಂದರೆ ಪರಿಹಾರ ಕೊಡುವ ಬಗ್ಗೆ ಯೋಚನೆ ಮಾಡೋಣ ಎಂದು ಸಚಿವರು ಭರವಸೆ ನೀಡಿದರು.

Share Post