Bengaluru

ಪತ್ರಕರ್ತೆ ಅನುಮಾನಾಸ್ಪದ ಸಾವು; ಕೊಲೆ ಶಂಕೆ

ಬೆಂಗಳೂರು: ಪತ್ರಕರ್ತೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವುದು ತಡವಾಗಿ ಬೆಳಕಿಗೆ ಬಂದಿದೆ. ರಾಯಿಟರ್ಸ್‌ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತೆ ಶ್ರುತಿ (35) ತಮ್ಮ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗಂಡನೇ ಕೊಲೆ ಮಾಡಿದ್ದಾನೆಂದು ಶ್ರುತಿ ಕುಟುಂಬದವರು ದೂರು ನೀಡಿದ್ದಾರೆ. ಮಾರ್ಚ್‌ 22ರಂದು ಶ್ರುತಿ ಮೃತದೇಹ ಪತ್ತೆಯಾಗಿದ್ದು, ಇದೀಗ ಮೃತಳ ಕುಟುಂಬದವರು ವೈಟ್‌ಫೀಲ್ಡ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪತ್ರಕರ್ತೆ ಶ್ರುತಿ ಅವರು 2017ರಲ್ಲಿ ಅನೀಶ್‌ ಎಂಬುವವರನ್ನು ಮದುವೆಯಾಗಿದ್ದರು. ವೈಟ್‌ಫೀಲ್ಡ್‌ನ ನಲ್ಲೂರುಹಳ್ಳಿ ರಸ್ತೆ ಬಳಿಯ ಎಸ್‌.ವಿ.ಮೈಪೇರ್‌ ಅಪಾರ್ಟ್‌ಮೆಂಟ್‌ ಫ್ಲ್ಯಾಟ್‌ನಲ್ಲಿ ವಾಸವಿದ್ದರು. ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಅನೀಶ್‌ ಯಾವಾಗಲೂ ಶ್ರುತಿಗೆ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ. ಮದ್ಯಪಾನ ಮಾಡಿ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎಂದು ಶ್ರುತಿ ಸಹೋದರ ನಿಶಾಂತ್‌ ನಾರಾಯಣನ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಜನವರಿ 15ರಂದು ಹೆಂಡತಿ ಜೊತೆ ಜಗಳ ಮಾಡಿ ಕೊಲೆಗೆ ಯತ್ನಿಸಿದ್ದ. ಆಕೆಯ ಚೀರಾಟ ಕೇಳಿ ಓಡಿ ಬಂದಿದ್ದ ಭದ್ರತಾ ಸಿಬ್ಬಂದಿ ಪ್ರಾಣ ಉಳಿಸಿದ್ದರು ಎಂದೂ ದೂರಲಾಗಿದೆ.

Share Post