BengaluruPolitics

8 ಸಾವಿರ ಕೋಟಿ ಅಕ್ರಮ ಆರೋಪ; ಕುರುಬ ಸಮಾಜಕ್ಕೆ ಸಿಎಂರಿಂದ ಅಪಮಾನ ಎಂದ ಕಾಂಗ್ರೆಸ್‌

ಬೆಂಗಳೂರು; ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ ಯಲಹಂಕದಲ್ಲಿ ರೋಡ್‌ ಶೋ ನಡೆಸುವ ವೇಳೆ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಎಂಟು ಸಾವಿರ ಕೋಟಿ ರೂಪಾಯಿ ಅಕ್ರಮ ಮಾಡಿದ್ದಾರೆ ಎಂದು ಸಿಎಂ ಆರೋಪಿಸಿದ್ದರು. ಇದಕ್ಕೆ ಕಾಂಗ್ರೆಸ್‌ ತಿರುಗೇಟು ನೀಡಿದೆ.

ಸಿಎಂ ಬೊಮ್ಮಾಯಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಇದು ಕುರುಬ ಸಮಾಜ ಹಾಗೂ ಹಿಂದುಳಿದ ವರ್ಗಗಳಿಗೆ ಮಾಡುತ್ತಿರುವ ಅವಮಾನ ಎಂದು ಕಾಂಗ್ರೆಸ್‌ ಆರೋಪ ಮಾಡಿದೆ.

ಸಿಎಂ ಬೊಮ್ಮಾಯಿಯವರ ಭ್ರಷ್ಟಾಚಾರದ ಬಗ್ಗೆ ಸಿದ್ದರಾಮಯ್ಯ ಮಾತಾಡಿದಾಗ ಇದು ಲಿಂಗಾಯತರಿಗೆ ಮಾಡಿದ ಅಪಮಾನ ಎಂದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಹಾಗಿದ್ಮೇಲೆ, ಈಗ ಬೊಮ್ಮಾಯಿ ಮಾಡುತ್ತಿರುವ ಆರೋಪದಿಂದ ಕುರುಬರು ಹಾಗೂ ಹಿಂದುಳಿದ ವರ್ಗವದವರಿಗೆ ಮಾಡಿದ ಅಪಮಾನವಲ್ಲವೇ ಎಂದು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ.

 

Share Post