BengaluruPolitics

ಚುನಾವಣೆ ಹೊತ್ತಲೇ ರಾಜ್ಯಕ್ಕೆ ಆರ್‌ಎಸ್‌ಎಸ್‌ ಮುಖ್ಯಸ್ಥ

ಬೆಂಗಳೂರು; ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಈ ಸಂದರ್ಭದಲ್ಲೇ ಆರ್‌ಎಸ್‌ಎಸ್‌ ಮುಖ್ಯಸ್ಥರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಂದು ಸಂಜೆ ಮೋಹನ್‌ ಭಾಗವತ್‌ ಅವರು ಬೆಂಗಳೂರಿಗೆ ಬರಲಿದ್ದಾರೆ. ನಾಳೆ ಸಂಜೆ ಅವರು ವಾಪಸ್‌ ಹೊರಡಲಿದ್ದಾರೆ ಎಂದು ತಿಳಿದುಬಂದಿದೆ.

ಮೋಹನ್‌ ಭಾಗವತ್‌ ಅವರು ಇಂದು ರಾತ್ರಿ ಕೇಶವಕೃಪದಲ್ಲಿ ಉಳಿಯಲಿದ್ದಾರೆ. ಈ ವೇಳೆ ಆರ್‌ಎಸ್‌ಎಸ್‌ ಮುಖಂಡರ ಜೊತೆ ಭಾಗವತ್‌ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆರಿದ ಸಂದರ್ಭದಲ್ಲಿ ಭಾಗವತ್‌ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡಾ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ನಾಳೆ ಬೆಳಗ್ಗೆ ಯಡಿಯೂರಪ್ಪ ಮನೆಯಲ್ಲಿ ಉಪಾಹಾರ ಸೇವಿಸಲಿರುವ ಅಮಿತ್‌ ಶಾ, ನಂತರ ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

Share Post