BengaluruPolitics

ಬಿಜೆಪಿಯಿಂದ ಮುನಿರತ್ನ ವಜಾ ಮಾಡಿ; ಡಿ.ಕೆ.ಸುರೇಶ್‌

ಬೆಂಗಳೂರು; ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರು ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಹಾಗೂ ಅವಾಚ್ಯ ಶಬ್ದಗಳಿಂದ ಬೈದ ಆರೋಪ ಮಾಡಿದ್ದಾರೆ.. ಈ ಸಂಬಂಧ ಮಾತನಾಡಿರುವ ಮಾಜಿ ಸಂಸದ ಡಿ.ಕೆ.ಸುರೇಶ್‌, ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ನಮ್ಮ ಅಭ್ಯರ್ಥಿಗೂ ಕೂಡಾ ಬೆದರಿಕೆ ಹಾಕಿದ್ದರು.. ಮುನಿರತ್ನ ಅವರು ದಲಿತ ಸಮುದಾಯಕ್ಕೆ ಕೀಳು ಪದಗಳಿಂದ ಬೈದಿದ್ದಾರೆ.. ಬಿಜೆಪಿಯವರಿಗೆ ನೈತಿಕತೆ ಇದ್ದರೆ ಮುನಿರತ್ನ ಅವರನ್ನು ಪಕ್ಷದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದನ್ನು ಬಿಜೆಪಿಯವರು ಯಾವ ರೀತಿ ಅರಗಿಸಿಕೊಳ್ಳುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ.. ಈ ಬಗ್ಗೆ ಬಿಜೆಪಿಯ ಒಬ್ಬ ನಾಯಕನೂ ಇದುವರೆಗೂ ಪ್ರತಿಕ್ರಿಯೆ ಕೊಟ್ಟಿಲ್ಲ ಎಂದು ಡಿ.ಕೆ.ಸುರೇಶ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಮುನಿರತ್ನ ನಾವ್ಯಾರೂ ಕೆಳಿರದ ಪದಗಳನ್ನು ಬಳಸಿದ್ದಾರೆ.. ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಡಿ.ಕೆ.ಸುರೇಶ್‌ ಆಗ್ರಹ ಮಾಡಿದ್ದಾರೆ.

Share Post