BengaluruHealth

ಹಿರಿಯ ಹಾಸ್ಯನಟ ಮನದೀಪ್‌ ರಾಯ್‌ಗೆ ಹೃದಯಘಾತ; ಆಸ್ಪತ್ರೆಯಲ್ಲಿ ಚೇತರಿಕೆ

ಬೆಂಗಳೂರು; ಸ್ಯಾಂಡಲ್‌ವುಡ್‌ ಹಿರಿಯ ಹಾಸ್ಯನಟ ಮನದೀಪ್‌ ರಾಯ್‌ ಅವರಿಗೆ ಹೃದಯಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ, ಮೂರು ದಿನಗಳ ಹಿಂದೆಯೇ ಮನದೀಪ್‌ ರಾಯ್‌ ಅವರಿಗೆ ಹೃದಯಾಘಾತವಾಗಿದೆ. ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದ ಬಳಿ ಅವರನ್ನು ಡಿಸ್‌ಚಾರ್ಜ್‌ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. ಮನದೀಪ್ ರಾಯ್ ಅವರು ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯ ನಟರಾಗಿ ಬಣ್ಣ ಹಚ್ಚಿದ್ದಾರೆ.

Share Post