BengaluruPolitics

ಮುನಿಸಿಕೊಂಡ ಸತೀಶ್‌ ಜಾರಕಿಹೊಳಿ; ಅಸಮಾಧಾನ ತಣಿಸಿದ ಕೆ.ಸಿ.ವೇಣುಗೋಪಾಲ್‌

ಬೆಂಗಳೂರು; ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಭಿನ್ನಮತ ಕಾಣಿಸಿಕೊಂಡಂತೆ ಕಾಣುತ್ತಿದೆ. ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿಯವರು ಅಸಮಾಧಾನಗೊಂಡಿದ್ದು, 20ಕ್ಕೂ ಹೆಚ್ಚು ಶಾಸಕರನ್ನು ಕರೆದುಕೊಂಡು ಮೈಸೂರಿಗೆ ತೆರಳಲು ಸಿದ್ಧವಾಗಿದ್ದರು. ಅದಕ್ಕಾಗಿ ಬಸ್‌ ಕೂಡಾ ಬುಕ್‌ ಮಾಡಿದ್ದರು ಎನ್ನಲಾಗಿದೆ. ಆದ್ರೆ ಈ ವಿಷಯ ತಿಳಿದು ರಾತ್ರೋರಾತ್ರಿ ಬೆಂಗಳೂರಿಗೆ ಆಗಮಿಸಿದ ಕೆ.ಸಿ.ವೇಣುಗೋಪಾಲ್‌, ಸತೀಶ್‌ ಜಾರಕಿಹೊಳಿ ಅವರನ್ನು ಸಮಾಧಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ. 

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮೂಗು ತೂರಿಸುತ್ತಿರುವುದಕ್ಕೆ ಸತೀಶ್‌ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಜೊತೆಗೆ ಪಕ್ಷದ ಚಟುವಟಿಕೆಗಳಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬುದೂ ಸತೀಶ್‌ ಅವರ ಆರೋಪ.  ಕೆಪಿಸಿಸಿ ಸಂಘಟನೆ ಮರು ವಿಂಗಡಣೆಯಲ್ಲೂ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಆರೋಪಿಸಲಾಗಿದೆ.

 

Share Post