BengaluruPolitics

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಸವದಿ; 4.30ಕ್ಕೆ ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು; ಕಾಂಗ್ರೆಸ್‌ ನಾಯಕರ ಜೊತೆ ಮಾತುಕತೆ ನಡೆಸಿದ ನಂತರ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಸವದಿಯವರು ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿದ್ದರು. ಜೊತೆಗೆ ಕೋರ್‌ ಕಮಿಟಿ ಸದಸ್ಯರೂ ಆಗಿದ್ದರು. ಇದೀಗ ಅವರು ಪಕ್ಷದ ಎಲ್ಲಾ ಹುದ್ದೆಗಳನ್ನೂ ತೊರೆದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಅವರು ರಾಜೀನಾಮೆಯನ್ನು ರವಾನಿಸಿದ್ದಾರೆ. ಇನ್ನು ಪರಿಷತ್‌ ಸ್ಥಾನಕ್ಕೂ ಅವರು ರಾಜೀನಾಮೆ ನೀಡುತ್ತಿದ್ದು, ಸಂಜೆ 4.30ಕ್ಕೆ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ.

Share Post