BengaluruPolitics

ಸರಣಿ ಹತ್ಯೆ; ರಾಷ್ಟ್ರೀಯವಾದಿಗಳನ್ನೇ ಗುರಿ ಮಾಡಲಾಗಿದೆ ಎಂದ ಸಿ.ಟಿ.ರವಿ

ಬೆಂಗಳೂರು; ನಿನ್ನೆ ಇಬ್ಬರು ಯುವ ಉದ್ಯಮಿಗಳನ್ನು ಹತ್ಯೆ ಮಾಡಲಾಗಿತ್ತು. ಫಣೀಂದ್ರ ಹಾಗೂ ವಿನು ಕುಮಾರ್‌ ಅವರನ್ನು ವ್ಯಕ್ತಿಯೊಬ್ಬ ಹತ್ಯೆ ಮಾಡಿದ್ದ. ಈ ಪ್ರಕರಣಕ್ಕೆ ಈಗ ರಾಜಕೀಯ ಬಣ್ಣ ಬಳಿಯಲಾಗಿದೆ. ಈ ಕೊಲೆ ಸಂಬಂಧ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ. ಕೊಲೆಯಾದವರಲ್ಲಿ ಒಬ್ಬರಾದ ಫಣೀಂದ್ರ ಅವರು ರಾಷ್ಟ್ರೀಯವಾದಿಯಾಗಿದ್ದು, ಈ ಕಾರಣಕ್ಕಾಗಿಯೇ ಕೊಲೆ ಮಾಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ವಿಚಾರದ ಜೊತೆ ಇದ್ದವರನ್ನು ಕೊಲೆ ಮಾಡಲಾಗುತ್ತಿದೆ. ಈ ಸರಣಿ ಕೊಲೆಗಳ ಬಗ್ಗೆ ಸಂಶಯ ಮೂಡಿದೆ. ಈ ಸರ್ಕಾರ ಬದುಕಿದೆಯೋ ಸತ್ತಿದೆಯೋ ಎಂಬ ಅನುಮಾನ ಮೂಡುತ್ತಿದೆ ಎಂದು ಸಿ.ಟಿ.ರವಿ ಹೇಳಿದ್ದಾರೆ. ಹಿಂದೆ ಹಿಂದೆ ಕೊಲೆಗಳು ಆಗುತ್ತಿದ್ದರೂ ಸರ್ಕಾರ ಸುಮ್ಮನೆ ಕುಳಿತಿದೆ. ಈ ರೀತಿ ಕೊಲೆಗಳಾದಾಗ ಉತ್ತರ ಪ್ರದೇಶದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಿತ್ತು. ಆದ್ರೆ ನಮ್ಮ ರಾಜ್ಯ ಸರ್ಕಾರ ಸುಮ್ಮನೆ ಕುಳಿತಿದೆ. ಹೀಗಾಗಿ ರಾಷ್ಟ್ರೀಯವಾದಿಗಳನ್ನೇ ಗುರಿ ಮಾಡಿ ಕೊಲೆ ಮಾಡುತ್ತಿರುವುದನ್ನು ನೋಡಿದರೆ ಇದರ ಹಿಂದೆ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ.

Share Post