Bengaluru

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ; ಬಿಎಸ್‌ವೈ

ಬೆಂಗಳೂರು; ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನನ್ನ ಹೆಸರು ನಾಮಕರಣ ಮಾಡುವುದು ಬೇಡ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಮೊನ್ನೆಯಷ್ಟೇ ಸಿಎಂ ಬೊಮ್ಮಾಯಿಯವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಅವರ ಹೆಸರು ಇಡುತ್ತಿರುವುದಾಗಿ ಘೋಷಣೆ ಮಾಡಿದ್ದರು. ಆದ್ರೆ ಇದಕ್ಕೆ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತೀರ್ಮಾನದಿಂದ ಮನದುಂಬಿ ಬಂದಿದೆ. ಈ ವಿಮಾನ ನಿಲ್ದಾಣಕ್ಕೆ ನನ್ನ ಹೆಸ್ರು ಇಡುವುದು ಬೇಡ. ಕರ್ನಾಟಕದ ಯಾವುದೇ ಗಣ್ಯ ವ್ಯಕ್ತಿಗಳ ಹೆಸರು ಇಡುವುದು ಸೂಕ್ತ ಎಂದು ವಿನಯದಿಂದ ಮನವಿ ಮಾಡುತ್ತೇನೆ’ ಎಂದು ಹೇಳಿದ್ದಾರೆ.

ಈ ಹಿಂದೆ ಕೂಡಾ ಯಡಿಯೂರಪ್ಪ ಅವರ ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಡಬೇಕೆಂಬ ಪ್ರಸ್ತಾಪ ಬಂದಿತ್ತು. ಆದ್ರೆ ಆಗಲೂ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದ ಯಡಿಯೂರಪ್ಪ ಅವರು ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇಡುವುದು ಬೇಡ ಎಂದು ಹೇಳಿದ್ದರು. ಬೇರೆ ಯಾವುದಾದರೂ ಗಣ್ಯರ ಹೆಸರಿಡಬೇಕೆಂದು ಸೂಚನೆ ನೀಡಿದ್ದರು. ಈ ನಡುವೆಯೂ ಸಿಎಂ ಬೊಮ್ಮಾಯಿಯವರು ಯಡಿಯೂರಪ್ಪ ಹೆಸರನ್ನು ಘೋಷಣೆ ಮಾಡಿದ್ದರು. ಇದೇ 27ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ.

Share Post