BengaluruDistricts

ಶಿವಮೊಗ್ಗ ಪ್ರಕರಣ; ಕತ್ತಿ, ಗುರಾಣಿ ಬಳಸಿದ್ದರ ಬಗ್ಗೆ ಮಾಹಿತಿ ಇಲ್ಲ – ಜಿ.ಪರಮೇಶ್ವರ್‌

ಬೆಂಗಳೂರು; ಶಿವಮೊಗ್ಗದಲ್ಲಿ ನಿನ್ನೆ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಕತ್ತಿ, ಗುರಾಣಿ ಪ್ರದರ್ಶನ ಮಾಡಿದ್ದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಘಟನೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಇದೆಲ್ಲಾ ಏನು ಹೊಸದಾಗಿ ನಡೆಯುತ್ತಿದೆಯಾ ಎಂದು ಪ್ರಶ್ನೆ ಮಾಡಿದ್ದಾರೆ.

ಹಬ್ಬ ಹರಿದಿನಗಳಿದ್ದಾಗ ಬ್ಯಾನರ್‌ ಕಟ್ಟುತ್ತಾರೆ, ಪೋಸ್ಟರ್‌ಗಳನ್ನು ಹಾಕುತ್ತಾರೆ. ಕೆಲವರು ಇದನ್ನೇ ಅಡ್ವಾಂಟೇಜ್‌ ಆಗಿ ತೆಗೆದುಕೊಂಡಿದ್ದು, ಘಟನೆಗೆ ಕಾರಣ ಏನು ಎಂಬುದನ್ನು ಬಹಿರಂಗ ಮಾಡೋದಕ್ಕೆ ಆಗಲ್ಲ ಎಂದು ಪರಮೇಶ್ವರ್‌ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ನಿನ್ನೆ ಏನಾಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇದೆ. ಕೆಲವರು ಏನೇನೋ ಹೇಳಿಕೆ ಕೊಡುತ್ತಾರೆ ಕೊಡಲಿ ಎಂದು ಹೇಳಿದ್ದಾರೆ.

ಮೆರವಣಿಗೆ ಯಾರನ್ನೂ ಹೊರಗಿನಿಂದ ಬರಲು ಬಿಟ್ಟಿರಲಿಲ್ಲ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದಾದ್ಯಂತ ಕಟ್ಟೆಚ್ಚರ ವಹಿಸಿದ್ದೆವು. ಹೀಗಿದ್ದರೂ ಈ ಘಟನೆ ನಡೆದಿದೆ. ಪೊಲೀಸರು ದೊಡ್ಡ ಪ್ರಮಾಣದಲ್ಲಿ ಆಗಬೇಕಿದ್ದ ಗಲಾಟೆಯನ್ನು ತಪ್ಪಿಸಿದ್ದು, ಪರಿಸ್ಥಿತಿ ನಿಯಂತ್ರಣ ಮಾಡಿದ್ದಾರೆ ಎಂದು ಪರಮೇಶ್ವರ್‌ ಇದೇ ವೇಳೆ ಹೇಳಿದ್ದಾರೆ.

 

Share Post