BengaluruPolitics

ಸುಳ್ಳಿನ ಫ್ಯಾಕ್ಟರಿಯ ಸಿಇಒ ಆಗಲು ಸಿದ್ದು, ಡಿಕೆಶಿ ಪೈಪೋಟಿ; ಡಾ.ಸಿ.ಎನ್‌.ಅಶ್ವತ್ಥನಾರಾಯಣ

ಬೆಂಗಳೂರು; ಕಾಂಗ್ರೆಸ್‌ ಎಂಬ ಸುಳ್ಳಿನ ಫ್ಯಾಕ್ಟರಿಯ ಸಿಇಒ ಆಗಲು ಪೈಪೋಟಿ ನಡೆಸುತ್ತಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರು ‘ದಿನಕ್ಕೊಂದು ಸುಳ್ಳು’ ಎಂಬ ತತ್ವಕ್ಕೆ ಮೊರೆ ಹೋಗಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್‌.ಅಶ್ವತ್ಥನಾರಾಯಣ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಸಿದ್ದರಾಮಯ್ಯನವರ ಸುಳ್ಳುಗಳನ್ನು ಜನರು ನಂಬುವುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. .

ಲೋಕಾಯುಕ್ತದ ಕೈ ಕಟ್ಟಿ ನೀರಿಗೆ ಬಿಟ್ಟ ಅರ್ಕಾವತಿ ಹಗರಣದ ಪಿತಾಮಹ ಸಿದ್ದರಾಮಯ್ಯ ಅವರ ಸುಳ್ಳುಗಳ ಸರಮಾಲೆಯನ್ನು ಕೇಳಿ, ಡಿ.ಕೆ.ಶಿವಕುಮಾರ್‌ ಅವರು ಅಹುದಹುದೆನ್ನಬಹುದೇ ವಿನಃ ನಾಡಿನ ಜನರು ನಂಬಲಾರರು’ ಎಂದು ಟೀಕಿಸಿರುವ ಸಚಿವರು, ಡಿವೈಎಸ್‌ಪಿ ಗಣಪತಿ ಅವರ ಆತ್ಮಹತ್ಯೆಗೆ ಕಾರಣವೇನೆಂದು ಕೇಳಿದರೆ ಕಳ್ಳರಂತೆ ನುಣುಚಿಕೊಳ್ಳುವುದೇಕೆ ಸಿದ್ದರಾಮಯ್ಯ ಅವರೇ?’ ಎಂದು ಪ್ರಶ್ನಿಸಿದ್ದಾರೆ.

Share Post