BengaluruPolitics

ಕ್ಷೇತ್ರ ವಿಚಾರದಲ್ಲಿ ಸಿದ್ದರಾಮಯ್ಯ ಪ್ರಚಾರ ಪಡೆಯುತ್ತಿದ್ದಾರೆ; ಬಿಎಸ್‌ವೈ

ಬೆಂಗಳೂರು; ಸಿದ್ದರಾಮಯ್ಯ ಅವರ ಕ್ಷೇತ್ರ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಸಿದ್ದರಾಮಯ್ಯ ಅವರು ಈ ಬಗ್ಗೆ ಬರೀ ಹೇಳಿಕೆ ನೀಡುತ್ತಾ ಪ್ರಚಾರ ಪಡೆಯುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸುಮ್ಮನೆ ಅಲ್ಲಿ ನಿಲ್ಲುತ್ತೇನೆ, ಇಲ್ಲಿ ನಿಲ್ಲುತ್ತೇನೆ ಎಂದು ಹೇಳುತ್ತಾ ಪ್ರಚಾರ ಪಡೆಯುತ್ತಿದ್ದಾರೆ ಎಂದು ಹೇಳಿದ್ದರು.

ಸಿದ್ದರಾಮಯ್ಯ ಅವರ ಸ್ಪರ್ಧೆ ಮಾಡುವ ಕ್ಷೇತ್ರದ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಆದ್ರೆ ಅವರು ಎಲ್ಲಿ ನಿಂತ್ರೂ ಗೆಲ್ತೇನೆ ಎಂಬ ವಾತಾವರಣ ಸೃಷ್ಟಿ ಮಾಡಿಕೊಳ್ಳುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಇನ್ನು ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದಾಗಲೇ ಬಿಎಸ್‌ವೈ ಒಂದು ಮಾತು ಹೇಳಿದ್ದರು. ಸಿದ್ದರಾಮಯ್ಯ ಯಾವ ಕಾರಣಕ್ಕೂ ಕೋಲಾರದಲ್ಲಿ ನಿಲ್ಲೋದಿಲ್ಲ. ಮೈಸೂರು ಕಡೆಗೆ ಬರುತ್ತಾರೆ ಎಂದು ಹೇಳಿದ್ದರು. ಅವರ ಈ ಮಾತು ಈಗ ನಿಜವಾಗುತ್ತಿದೆ.

ಮತ್ತೆ ನಾನೇ ಸಿಎಂ ಆಗುತ್ತೇನೆ ಎಂದು ಹೇಳಿರುವ ಬೊಮ್ಮಾಯಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಬೊಮ್ಮಾಯಿಯವರು ಒಳ್ಳೆ ಕೆಲಸ ಮಾಡಿದ್ದಾರೆ. ಹೀಗಾಗಿ ಅವರೇ ಸಿಎಂ ಆಗುವುದಾದರೆ ಅದನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

Share Post