BengaluruPolitics

ಶಿವಮೊಗ್ಗ ಸಾವರ್ಕರ್‌ ಫೋಟೋ ಕಿತ್ತ ವಿಚಾರ; ಈಶ್ವರಪ್ಪ ಆರೋಪಕ್ಕೆ ಸಿದ್ದರಾಮಯ್ಯ ಕಿಡಿ

ಬೆಂಗಳೂರು; ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಹಳದಿ. ಹೀಗಾಗಿಯೇ ಈಶ್ವರಪ್ಪ ಅವರು ಕಾಂಗ್ರೆಸ್‌ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸಾವರ್ಕರ್‌ ಭಾವಚಿತ್ರ ತೆಗೆದಿದ್ದರ ಹಿಂದೆ ಕಾಂಗ್ರೆಸ್‌ ಇದೆ ಎಂದು ಈಶ್ವರಪ್ಪ ಆರೋಪಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.

ಮೊದಲು ಕಿತಾಪತಿ ಮಾಡುವವರು ಬಿಜೆಪಿಯವರೇ. ಆ ಮೇಲೆ ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಾರೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್‌ ಫೋಟೋ ಹಾಕಿದ್ದಾರೆ. ಹಾಕಲಿ ಬೇಡ ಎನ್ನುವುದಿಲ್ಲ. ಆದ್ರೆ ಟಿಪ್ಪು ಫೋಟೋ ಯಾಕೆ ತೆಗೆದ್ರಿ..? ಈ ರೀತಿ ಮಾಡಿದ್ರೆ ಗಲಭೆ ಆಗೋದಿಲ್ಲವೇ..? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಈಗ ಸರ್ಕಾರ ನಿಮ್ಮದೇ ಇದೆ. ಎಸ್‌ಡಿಪಿಐ, ಪಿಎಫ್‌ಐ ಸಾಮರಸ್ಯ ಹಾಳು ಮಾಡುತ್ತಿವೆ ಎಂದಾದರೆ, ಅದಕ್ಕೆ ನಿಮ್ಮ ಬಳಿ ದಾಖಲೆಗಳಿದ್ದರೆ ಕೂಡಲೇ ಕ್ರಮ ಕೈಗೊಳ್ಳಿ. ಅದು ಬಿಟ್ಟು ಇಬ್ಬದಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Share Post