Bengaluru

ಯಾರಿಂದ ಯಾರೂ ತಬ್ಬಲಿಯಾಗಲ್ಲ:ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು:  ರಾಜ್ಯದ ಜನರ ಆಶೀರ್ವಾದ ಇರುವವರೆಗೆ ಯಾರೂ ತಬ್ಬಲಿಯಾಗಲ್ಲ, ಅದು ಇಬ್ರಾಹಿಂ ಆದರೂ ಅಷ್ಟೇ, ನಾನೇ ಆದರೂ ಅಷ್ಟೆ. ಜನರ ಪ್ರೀತಿ ವಿಶ್ವಾಸ ಮಾತ್ರ ಮುಖ್ಯ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ರು.

ನನ್ನ ಪ್ರಕಾರ ಸಿ.ಎಂ ಇಬ್ರಾಹಿಂ ಅವರು ಪಕ್ಷ ತೊರೆಯಲ್ಲ, ಜೆಡಿಎಸ್ ಗೆ ಹೋಗಲ್ಲ. ಈ ಹಿಂದೆ ಅವರಿಗೆ ರಾಜ್ಯಸಭಾ ಸ್ಥಾನವನ್ನು ತಪ್ಪಿಸಿದ್ದೇ ದೇವೇಗೌಡರು ಹಾಗಾಗಿ ಅವರು ಮತ್ತೆ ಜೆಡಿಎಸ್ ಗೆ ಹೋಗಲ್ಲ ಎಂದು ನನಗನಿಸುತ್ತಿದೆ. ಇಬ್ರಾಹಿಂ ಅವರು ಕೋಪದಲ್ಲಿ ಕಾಂಗ್ರೆಸ್ ಬಿಡುತ್ತೇನೆ ಎಂದಿರಬಹುದು, ನಾನು ಅವರ ಜೊತೆ ಮಾತನಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ಅವರಿಗೂ ಗೊತ್ತಿದೆ. ನನಗೆ ಬಾದಾಮಿಯಿಂದ ಸ್ಪರ್ಧೆ ಮಾಡಿ ಎಂದು ಹೇಳಿದವರಲ್ಲಿ ಇಬ್ರಾಹಿಂ ಕೂಡ ಒಬ್ಬರು. ಅವರು ನನಗೆ ಒಳ್ಳೆ ಸ್ನೇಹಿತ, ನನ್ನ ಬಗ್ಗೆ ಏನೇ ಹೇಳಿದ್ರೂ ಅದು ನನಗೆ ಶುಭ ಹಾರೈಸಿದ ಹಾಗೆ ಅನ್ಕೊತೀನಿ ಎಂದಿದ್ದಾರೆ.

Share Post