Bengaluru

ತಪ್ಪಿನ ಅರಿವಾಗಿ ಈಶ್ವರಪ್ಪ ರಾಜೀನಾಮೆ ಘೋಷಿಸಿದ್ದಾರೆ; ಸಿದ್ದರಾಮಯ್ಯ

ಬೆಂಗಳೂರು: ಈಶ್ವರಪ್ಪ ಅವರಿಗೆ ತಮ್ಮ ತಪ್ಪಿನ ಅರಿವಾಗಿದೆ. ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರು ಹೇಳಿದ್ದರಿಂದಲೇ ಸಂತೋಷ್‌ ಕಾಮಗಾರಿ ನಡೆಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ಮೇಲೆ ಕಮೀಷನ್‌ ಕೇಳಿದ್ದಾರೆ. ಹೀಗಾಗಿಯೇ ಸಂತೋಷ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈಶ್ವರಪ್ಪ ಸುಳ್ಳು ಹೇಳುತ್ತಲೇ ಬಂದಿದ್ದಾರೆ. ಇದೀಗ ಅವರ ತಪ್ಪಿನ ಅರಿವಾಗಿದೆ ಹೀಗಾಗಿ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

 

Share Post