Bengaluru

ಬಿಟ್ಟು ಹೋದವರನ್ನು ಸೇರಿಸಿಕೊಳ್ಳುತ್ತೇನೆ ಎಂದಿಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದೇನೆಯೇ ಹೊರತು, ನಮ್ಮ ಪಕ್ಷ ಬಿಟ್ಟು ಹೋದವರನ್ನು ವಾಪಸ್‌ ಸೇರಿಸಿಕೊಳ್ಳುತ್ತೇವೆ ಎಂದು ನಾನು ಹೇಳಿಲ್ಲ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್‌ ಶಾಸಕರು ಬಂದು ಚರ್ಚಿಸಿರುವುದು ನಿಜ ಎಂದು ಹೇಳಿದರು.

ಎರಡೂ ಪಕ್ಷದ ಶಾಸಕರು ಕಾಂಗ್ರೆಸ್‌ ಬರಲು ಉತ್ಸಾಹ ತೋರಿಸಿದ್ದಾರೆ. ಈ ಬಗ್ಗೆ ಬಂದು ನಮ್ಮ ಬಳಿ ಚರ್ಚೆ ಮಾಡಿದ್ದಾರೆ. ಹಾಗಂತ ಅವರು ನಾಳೆಯೇ ಕಾಂಗ್ರೆಸ್‌ಗೆ ಬರುತ್ತಾರೆ ಎಂದಲ್ಲ. ಚುನಾವಣೆ ಸಮಯದಲ್ಲಿ ಬರುತ್ತಾರೆ ಎಂದು ಸಿದ್ದರಾಮಯ್ಯ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. ಇನ್ನು ಬಿಟ್ಟುಹೋದವರ ಬಗ್ಗೆ ಮಾತನಾಡಿದ ಅವರು, ಬಿಟ್ಟು ಹೋದವರನ್ನು ನಾವು ಸೇರಿಸಿಕೊಳ್ಳುವುದಿಲ್ಲ. ಅವರನ್ನು ಸೇರಿಸಿಕೊಳ್ಳುತ್ತೇನೆ ಎಂದು ನಾನು ಹೇಳಿಲ್ಲ. ಬಿಜೆಪಿ ಶಾಸಕರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ ಎಂದಷ್ಟೇ ಹೇಳಿದ್ದೇನೆ ಎಂದು ಹೇಳಿದರು.

Share Post