Bengaluru

ಇತ್ಯರ್ಥಗೊಳಿಸುವ ಬದಲು ಪ್ರಚೋದನೆ ನೀಡಿದ್ದರ ಪರಿಣಾಮವೇ ಇದು-Siddaramayya

ಬೆಂಗಳೂರು:(bengaluru) ಹಿಜಾಬ್-ಕೇಸರಿ ಶಾಲು ಸಂಘರ್ಷ ನಡೆಯುತ್ತಿರುವ ಶಾಲಾ ಕಾಲೇಜುಗಳಿಗೆ ತಕ್ಷಣ ರಜೆ ಘೋಷಿಸಿ ಆನ್‌ ಲೈನ್ ತರಗತಿಗಳನ್ನು ಶುರು ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ವಿಪಕ್ಷ ನಾಯಕರ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳಳೇ ಕದನಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ. ವಿದ್ಯಾರ್ಥಿಗಳು ಸಂಘರ್ಷಕ್ಕೆ ಇಳಿದಿರುವ ಕಡೆಗಳಲ್ಲಿ ಪುಂಡು ವಿದ್ಯಾರ್ಥಿಗಳ ಮೇಲೆ ಕಠಿಣ ಕ್ರಮಕೈಗೊಳ್ಳದೆ ಪೊಲೀಸರು ಮೂಕ ಪ್ರೇಕ್ಷಕರಾಗಿರುವುದು ವಿದ್ಯಾರ್ಥಿಗಳ ಹೆತ್ತವರಲ್ಲಿ ಆತಂಕ ಹುಟ್ಟಿಸಿದೆ.

ಪ್ರಾರಂಭದ ಹಂತದಲ್ಲಿಯೇ ಸ್ಥಳೀಯವಾಗಿ ಸೌಹಾರ್ದಯುತವಾಗಿ ಬಗೆಹರಿಸಬಹುದಾಗಿದ್ದ ಸರಳ‌ ಸಮಸ್ಯೆಯನ್ನು ರಾಜಕೀಯ ಕಾರಣಕ್ಕಾಗಿ ಉಲ್ಭಣಗೊಳಿಸಿರುವ ರಾಜ್ಯ ಸರ್ಕಾರ ಈಗ ನಿಯಂತ್ರಿಸಲಾಗದೆ ಕೈಚೆಲ್ಲಿ ಕೂತಿದೆ. ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ರಾಜ್ಯ ಶಿಕ್ಷಣ ಸಚಿವರು ಮತ್ತು ಗೃಹಸಚಿವರು ನೀಡುತ್ತಿರುವ ಪ್ರಚೋದನಾಕಾರಿ ಹೇಳಿಕೆ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗಿರುವುದು ವಿಷಾದನೀಯ.

ಈ ಹಿನ್ನೆಲೆಯಲ್ಲಿ‌ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಮುಖ್ಯಮಂತ್ರಿಗಳು(Chief minister) ತಕ್ಷಣ ಮಧ್ಯಪ್ರವೇಶಿಸಿ ಶಾಲಾ‌ಕಾಲೇಜುಗಳಿಗೆರಜೆ ಘೋಷಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಆನ್ಲೈನ್(Online) ತರಗತಿಗಳನ್ನು ತಕ್ಷಣ ಶುರು ಮಾಡಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

Share Post