BengaluruCrime

ಚಿರತೆ ದಾಳಿ ನಿಯಂತ್ರಣಕ್ಕೆ ವಿಶೇಷ ತಂಡ; ಮೃತರ ಕುಟುಂಬಕ್ಕೆ 15 ಲಕ್ಷ ಪರಿಹಾರ

ಬೆಂಗಳೂರು; ರಾಜ್ಯದಲ್ಲಿ ಚಿರತೆಗಳ ದಾಳಿ ಜಾಸ್ತಿಯಾಗಿದೆ. ಹೀಗಾಗಿ ಚಿರತೆ ದಾಳಿ ತಡೆಯಲು ವಿಶೇಷ ತಂಡ ರಚನೆ ಮಾಡಲಾಗಿದೆ. ಅವರಿಗೆ ಚಿರತೆ ದಾಳಿ ತಡೆಯಲು ನಿರ್ದಿಷ್ಟ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಮೈಸೂರು ಮತ್ತು ಬೆಂಗಳೂರು ವಲಯದಲ್ಲಿ ಆನೆ ಕಾರಿಡಾರ್ ಸುತ್ತಮುತ್ತ ಚಿರತೆಗಳೂ ಓಡಾಡುತ್ತಿವೆ. ಅವುಗಳು ಮನುಷ್ಯರ ಮೇಲೆ ದಾಳಿ ಕೂಡಾ ಮಾಡುತ್ತಿವೆ. ಹೀಗಾಗಿ ಚಿರತೆ ದಾಳಿಗಳನ್ನು ನಿಯಂತ್ರಿಸಲು ಹಾಗೂ ಚಿರತೆಗಳನ್ನು ಹಿಡಿಯಲು ವಿಶೇಷ ತಂಡ ಕಾರ್ಯಾಚರಣೆ ಮಾಡಲಿದೆ ಎಂದು ಹೇಳಿದ್ದಾರೆ. ಜೊತೆಗೆ ಚಿರತೆ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ 15 ಲಕ್ಷ ಪರಿಹಾರ ನೀಡೋದಾಗಿ ಕೂಡಾ ಸಿಎಂ ಘೋಷಣೆ ಮಾಡಿದ್ದಾರೆ.

Share Post