Bengaluru

ಬಿಜೆಪಿ ಚುನಾವಣಾ ವಿಜಯೋತ್ಸವದಲ್ಲಿ ಭಾಗಿಯಾದ ಸಿಎಂ ಬಸವರಾಜ್‌ ಬೊಮ್ಮಾಯಿ

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿಯಾದ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಜಯೋತ್ಸವದಲ್ಲಿ ಭಾಗಿಯದ್ರು. ಬೆಂಗಲೂರಿನ ಮಲ್ಲೇಶ್ವರಂನಲ್ಲಿರುವ ಜಗನ್ನಾಥ ಭವನದಲ್ಲಿ ಆಯೋಜಿಸಲಾಗಿರುವ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.  ನಳಿನ್‌ ಕುಮಾರ್‌ ಕಟೀಲ್‌, ಶ್ರೀರಾಮುಲು ಸೇರಿದಂತೆ ಹಲವು ಸಚಿವರು, ಶಾಸಕರು, ಕಾರ್ಯಕರ್ತರು ಸಮಾರಂಭದಲ್ಲಿ ಭಾಗಿಯಾದ್ರು.

ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಹಾಗೂ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಸನ್ಮಾನ ಸಮಾರಂಭ ಕೂಡ ಮಾಡಲಾಗಿದೆ. ಪರಸ್ಪರ ಸಿಹಿ ಹಂಚಿ ತಮ್ಮ ವಿಜಯೋತ್ಸವವನ್ನು ಆಚರಣೆ ಮಾಡಿದ್ದಾರೆ.

Share Post