BengaluruDistrictsPolitics

ಕೇಂದ್ರದಿಂದ ರಾಜ್ಯ ಸರ್ಕಾರದ ಸರ್ವರ್‌ ಹ್ಯಾಕ್‌; ಸಚಿವ ಸತೀಶ್‌ ಜಾರಕಿಹೊಳಿ ವಾಗ್ದಾಳಿ

ಬೆಳಗಾವಿ; ಐದು ಗ್ಯಾರೆಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರಲು ನಾವು ಪ್ರಯತ್ನಿಸುತ್ತಿದ್ದೇವೆ. ಆದ್ರೆ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಸರ್ವರ್‌ ಹ್ಯಾಕ್‌ ಮಾಡಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿರುವ ಅವರು, ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಸರ್ವರ್‌ ಸಮಸ್ಯೆ ಎದುರಾಗಿರುವುದಕ್ಕೆ ಕೇಂದ್ರ ಸರ್ಕಾರದ ಮೇಲೆ ಬೆಟ್ಟು ಮಾಡಿದ್ದಾರೆ.

ನಮ್ಮ ಸಿಸ್ಟಂಗಳನ್ನು ಇವಿಎಂಗಳನ್ನು ಹ್ಯಾಕ್‌ ಮಾಡಿದಂತೆ ಹ್ಯಾಕ್‌ ಮಾಡಲಾಗಿದೆ. ನಮ್ಮ ಸರ್ವರ್‌ನ್ನು ಹ್ಯಾಕ್‌ ಮಾಡಿದ್ದರಿಂದಲೇ ಅರ್ಜಿ ಸಲ್ಲಿಸುವುದಕ್ಕೆ ಸಮಸ್ಯೆ ಆಗುತ್ತಿದೆ. ಆದ್ರೂ ನಾವು ಯೋಜನೆಗಳನ್ನು ನಿಲ್ಲಿಸೋದಿಲ್ಲ. ಆನ್‌ಲೈನ್‌ನಲ್ಲಿ ಸಮಸ್ಯೆಯಾದರೆ ಆಫ್‌ಲೈನ್‌ನಲ್ಲೇ ಅರ್ಜಿಗಳನ್ನು ಪಡೆಯುತ್ತವೆ. ಇದರಿಂದ ಒಂದು ತಿಂಗಳು ತಡವಾಗಬಹುದು ಅಷ್ಟೇ. ಆದ್ರೆ ನಾವು ಗ್ಯಾರೆಂಟಿಗಳನ್ನು ಜಾರಿ ಮAಡೋದ್ರಿಂದ ಹಿಂಧೆ ಸರಿಯೋದಿಲ್ಲ ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

Share Post