BengaluruCrime

ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಮೇಲೆ ಕಲ್ಲು ತೂರಾಟ

ಬೆಂಗಳೂರು; ರಾತ್ರಿ ವೇಳೆ ಓಡಾಡುವ ಪುಂಡರು ಆಗಾಗ ಅವಾಂತರಗಳನ್ನು ಸೃಷ್ಟಿ ಮಾಡುತ್ತಿರುತ್ತಾರೆ. ಅದೇ ರೀತಿಯ ಅವಾಂತರವನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾಡಿದ್ದಾರೆ. ಕುಡಿದ ಅಮಲಿನಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ ಕಾರುಗಳ ಮೇಲೆ ಕಲ್ಲು ತೂರಿರುವ ಘಟನೆ ಕಳೆದ ತಡರಾತ್ರಿ ನಡೆದಿದೆ. ಬೆಂಗಳೂರಿನ ಶ್ರೀನಿವಾಸ ನಗರದಲ್ಲಿ ಈ ಘಟನೆ ನಡೆದಿದೆ.

ಕಳೆದ ತಡರಾತ್ರಿ 2.50ರ ಸುಮಾರಿಗೆ ಈ ಕೃತ್ಯ ಎಸಗಲಾಗಿದೆ. ಬೈಕ್‌ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಆರಕ್ಕೂ ಹೆಚ್ಚು ಕಾರುಗಳ ಮೇಲೆ ಕಲ್ಲು ತೂರಿದ್ದಾರೆ. ಇದ್ರಿಂದಾಗಿ ಕಾರಿನ ಗಾಜುಗಳು ಪುಡಿಪುಡಿಯಾಗಿವೆ. ಆರೋಪಿಗಳ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಐ20, ಹ್ಯೂಂಡೈ, ಓಮ್ನಿ ಕಾರುಗಳು ಸೇರಿದಂತೆ 6ಕ್ಕೂ ಹೆಚ್ಚು ಕಾರುಗಳಿಗೆ ಹಾನಿಯಾಗಿದೆ.

Share Post