BengaluruPolitics

ಸುರ್ಜೇವಾಲಾ ರಾಜ್ಯ ಲೂಟಿ ಮಾಡಲು ಬಂದ ದೆಹಲಿ ಪ್ರತಿನಿಧಿ; ಹೆಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು; ನಿನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್‌ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಭಾಗವಹಿಸಿದ್ದರು. ಇದಕ್ಕೆ ವಿಪಕ್ಷಗಳಿಂದ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿಯವರು, ಸುರ್ಜೇವಾಲಾ ಅವರು ರಾಜ್ಯ ಲೂಟಿ ಮಾಡಲು ದೆಹಲಿಯಿಂದ ಬಂದಿರುವ ಪ್ರತಿನಿಧಿ ಎಂದು ದೂರಿದರು.

ನಿನ್ನೆ ಅಧಿಕಾರಿಗಳು ಜೊತೆ ಸುರ್ಜೇವಾಲಾ ಸಭೆ ನಡೆಸಿದರು. ಈ ವೇಳೆ ಅಧಿಕಾರಿಗಳಿಗೆ ಸುರ್ಜೇವಾಲಾ ಏನು ಹೇಳಿದ್ದಾರೆ ಎಂಬುದು ಗೊತ್ತು. ಅಧಿಕಾರಿಗಳ ಮೂಲಕ ರಾಜ್ಯವನ್ನು ಲೂಟಿ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ಹೆಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದರು.

Share Post