BengaluruPolitics

ಸುರ್ಜೇವಾಲಾ ಸಭೆ ಅಧಿಕೃತ ಅಲ್ಲ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು; ಸುರ್ಜೇವಾಲಾ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿಲ್ಲ. ಸುರ್ಜೇವಾಲಾ ಅವರು ಅಧಿಕಾರಿಗಳ ಜೊತೆ ಸಭೆ ನಡೆಸೋದಕ್ಕೆ ಆಗುತ್ತಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ನಾಯಕರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಅವರು ಪ್ರತಿಕ್ರಿಯೆ ನೀಡಿದರು.

ಸುರ್ಜೇವಾಲಾ ಅವರಿದ್ದ ಸಭೆ ಅಧಿಕೃತ ಅಲ್ಲ. ಅವರು ಶಾಸಕರ ಜೊತೆ ಮಾತನಾಡಲು ಬಂದಿದ್ದರು. ಈ ವೇಳೆ ಅಲ್ಲಿ ಅಧಿಕಾರಿಗಳು ಇದ್ದಾರೆ ಅಷ್ಟೇ. ಇದು ಅಧಿಕೃತ ಸಭೆ ಅಲ್ಲವೇ ಅಲ್ಲ. ಅದು ಡಿಸಿಎಂ ಪಾಲ್ಗೊಂಡಿದ್ದ ಸಭೆ. ಚುನಾವಣೆ ಸಂಬಂಧ ಸಭೆ ಕರೆಯಲಾಗಿತ್ತು ಎಂದು ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಯವರು ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಸತ್ಯಾಂಶವಿಲ್ಲ. ಬಿಜೆಪಿಯವರು ಬೇಕಾದರೆ ರಾಜ್ಯಪಾಲರಿಗೆ ದೂರು ಕೊಡಬಹುದು. ನನ್ನ ಅಭ್ಯಂತರವಿಲ್ಲ ಎಂದು ಇದೇ ವೇಳೆ ಸಿದ್ದರಾಮಯ್ಯ ತಿಳಿಸಿದರು.

Share Post