Bengaluru

ದೇವೇಗೌಡರ ಆರೋಗ್ಯ ವಿಚಾರಿಸಿದ ಶ್ರೀಗಳು

ಬೆಂಗಳೂರು; ಮಾಜಿ ಪ್ರಧಾನಿ ದೇವೇಗೌಡರು ಕಾಲು ನೋವಿನಿಂದ ಬಳಲುತ್ತಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಅವರನ್ನು ಭೇಟಿಯಾಗಲು ಇಂದು ಇಬ್ಬರು ಸ್ವಾಮೀಜಿಗಳು ಬಂದಿದ್ದರು.

ಇಂದು ಬೆಳಗ್ಗೆ ಪದ್ಮನಾಭ ನಗರ ನಿವಾಸಕ್ಕೆ ಆಗಮಿಸಿದ ಸಿರಿಗೆರೆಯ ಶ್ರೀ ತರಳಬಾಳು ಪೀಠಾಧಿಪತಿ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಗೌಡರ ಯೋಗಕ್ಷೇಮ ವಿಚಾರಿಸಿದರು. ಅನಂತರ ಶ್ರೀ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಂಜಾವಧೂತ ಮಹಾ ಸ್ವಾಮೀಜಿಗಳು ಭೇಟಿ ನೀಡಿ ಗೌಡರ ಆರೋಗ್ಯ ವಿಚಾರಿಸಿದರು.

Share Post