BengaluruCrime

ಸ್ವಿಗ್ಗಿ ಹುಡುಗನ ಸುಲಿಗೆ ಪ್ರಕರಣ; ಇಬ್ಬರು ಆರೋಪಿಗಳ ಅರೆಸ್ಟ್‌

ಬೆಂಗಳೂರು; ಬೆಂಗಳೂರಿನಲ್ಲಿ ಇತ್ತೀಚೆಗೆ ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿವೆ. ರಾತ್ರಿ ಒಬ್ಬಂಟಿಯಾಗಿ ತೆರಳುವವರೇ ಟಾರ್ಗೆಟ್‌ ಆಗುತ್ತಿದ್ದಾರೆ. ಹೀಗಾಗಿ, ಪೊಲೀಸರು ಇಂತಹ ಸುಲಿಗೆಕೋರರ ಬೆನ್ನು ಬಿದ್ದಿದ್ದಾರೆ. ಅಕ್ಟೋಬರ್‌ ಹತ್ತು ರಂದು ಸ್ವಿಗ್ಗಿ ಡೆಲಿವರಿ ಹುಡುಗನಿಗೆ ಚಾಕುವಿನಿಂದ ತಿವಿದು, ಸುಲಿಗೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.

ಸಜ್ಜಾದ್‌ ಖಾನ್‌ ಹಾಗೂ ಸೈಫ್‌ ಮೌಲಾನಾ ಎಂಬುವವರೇ ಬಂಧಿತ ಆರೋಪಿಗಳು. ಇವರು ರಾತ್ರಿ ವೇಳೆ ಒಬ್ಬಂಟಿಯಾಗಿ ಓಡಾಡುವ ಡೆಲಿವರಿ ಹುಡುಗರನ್ನೇ ಟಾರ್ಗೆಟ್‌ ಮಾಡಿದ್ದರು ಎಂದು ತಿಳಿದುಬಂದಿದೆ. ಚಾಮರಾಜಪೇಟೆ, ಕಲಾಸಿ ಪಾಳ್ಯ ಹಾಗೂ ವಿಲ್ಸನ್‌ ಗಾರ್ಡನ್‌ ವ್ಯಾಪ್ತಿಯಲ್ಲಿ ಈ ಆರೋಪಿಗಳು ಸುಲಿಗೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Share Post