BengaluruCrimePolitics

ಜೈನಮುನಿ ಹತ್ಯೆ ಹಿಂದೆ ಉಗ್ರಗಾಮಿಗಳ ಕೈವಾಡ ಇದೆ; ಶಾಸಕ ಸಿದ್ದು ಸವದಿ ಆರೋಪ

ಬೆಂಗಳೂರು; ಜೈನ ಮುನಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕರೆಂಟ್‌ ಶಾಕ್‌ ಕೊಟ್ಟು ಚಿತ್ರಹಿಂಸೆ ನೋಡಿ ಕೊಲೆ ಮಾಡಿದ್ದಾರೆ. ಇದನ್ನು ನೋಡಿದರೆ ಇದರ ಹಿಂದೆ ಉಗ್ರಗಾಮಿ ಸಂಘಟನೆ ಐಸಿಸ್‌ ಕೈವಾಡಿ ಇದೆ ಎಂಬ ಅನುಮಾನ ಮೂಡುತ್ತದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಜೈನಮುನಿಯ ಹತ್ಯೆ ಹಿಂದೆ ಉಗ್ರರ ಕೈವಾಡ ಇದ್ದಂತೆ ಕಾಣುತ್ತಿದೆ. ಹೀಗಾಗಿ ತೀವ್ರ ತನಿಖೆಯಾಗಬೇಕು. ಯಾಕಂದ್ರೆ, ಇನ್ನೂ ಭಯಾನಕ ಘಟನೆಗಳು ಭವಿಷ್ಯಗಳ ನಡೆಯುವ ಆತಂಕವಿದೆ ಎಂದು ಸಿದ್ದು ಸವದಿ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರದ ನಡೆ ಸಂಶಯಾಸ್ಪದವಾಗಿದೆ. ಮುನಿಗಳ ಹತ್ಯೆಯ ಹಿಂದೆ ಪಿತೂರಿ ಇರೋದನ್ನು ಮನಗಂಡು ಸರ್ಕಾರ ಹೆಜ್ಜೆ ಇಡಬೇಕಾಗಿದೆ ಎಂದೂ ಸಿದ್ದು ಸವದಿ ಹೇಳಿದ್ದಾರೆ.

Share Post