BengaluruCrime

ಪಾದಚಾರಿಗಳಿಗೆ ಡಿಕ್ಕಿ ಹೊಡೆಯಿತು ಕಾರು; ಕಿರುತೆರೆ ಸಹಾಯಕ ನಿರ್ದೇಶಕನ ಅವಾಂತರ

ಬೆಂಗಳೂರು; ಕಾರಿನಲ್ಲಿ ವೇಗವಾಗಿ ಬಂದ ಕಿರುತೆರೆ ಅಸಿಸ್ಟೆಂಟ್ ಡೈರೆಕ್ಟರ್ ಒಬ್ಬ ನಾಲ್ವರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಕತ್ರಿಗುಪ್ಪೆ ಬಳಿ ನಡೆದಿದ್ದು, ಘಟನೆಯಲ್ಲಿ ಒಬ್ಬ ಪಾದಾಚಾರಿ ಸಾವನ್ನಪ್ಪಿದ್ದಾನೆ. ಮೂವರಿಗೆ ಗಾಯಗಳಾಗಿವೆ.

ಬನಶಂಕರಿ ಕಡೆಯಿಂದ ಕಾರಿನಲ್ಲಿ ವೇಗವಾಗಿ ಬಂದ ಕಿರುತೆರೆ ಅಸಿಸ್ಟೆಂಟ್ ಡೈರೆಕ್ಟರ್ ಮುಖೇಶ್, ನಾಲ್ವರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಪಾದಚಾರಿಗಳು ಮೇಲಕ್ಕೆ ಚಿಮ್ಮಿದ್ದಾರೆ. ಮಾತ್ರವಲ್ಲದೇ ಸ್ಥಳದಲ್ಲೇ ಇದ್ದ ಇನ್ನೊಂದು ಕಾರು ಹಾಗೂ ಬೈಕಿಗೂ ಕಾರು ಡಿಕ್ಕಿಯಾಗಿದೆ.

ಇಟ್ಟಮಡು ಬಳಿ ಇಳಿಜಾರು ಇದ್ದ ಕಾರಣ ಕಾರು ವೇಗವಾಗಿ ಬಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸುರೇಶ್ ಎಂಬಾತ ಮೃತಪಟ್ಟಿದ್ದು, ಕಾರು ಚಾಲಕ ಮುಖೇಶ್ ನಿರ್ಲಕ್ಷ್ಯ ಹಾಗೂ ವೇಗದ ಚಾಲನೆಯೇ ಕಾರಣ ಎಂದು ಪಶ್ಚಿಮ ವಿಭಾಗ ಸಂಚಾರಿ ಡಿಸಿಪಿ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.

ಗಾಯಾಳುಗಳಲ್ಲಿ ಮೂವರು ಕ್ಯಾಟರಿಂಗ್‌ ಕೆಲಸ ಮಾಡುತ್ತಿದ್ದು, ಒಬ್ಬ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

 

Share Post