BengaluruPolitics

ಟಿಕೆಟ್‌ ಸಿಗದ ಹಿನ್ನೆಲೆ; ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಆರ್‌.ಶಂಕರ್‌

ಬೆಂಗಳೂರು; ರಾಣೆಬೆನ್ನೂರು ಕ್ಷೇತ್ರದಿಂದ ಟಿಕೆಟ್‌ ಬಯಸಿದ್ದ ವಿಧಾನಪರಿಷತ್‌ ಸದಸ್ಯ ಆರ್‌.ಶಂಕರ್‌ಗೆ ನಿರಾಸೆಯಾಗಿದೆ. ಈ ಕಾರಣದಿಂದಾಗಿ ಅವರು ತಮ್ಮ ಪರಿಷತ್‌ ಸದಸ್ಯತ್ವನ್ನು ತ್ಯಜಿಸಿದ್ದಾರೆ. ಇಂದು ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಭೇಟಿ ರಾಜೀನಾಮೆ ಸಲ್ಲಿಸಿದ್ದಾರೆ. ಸಭಾಪತಿ ಮುಂದೆಯೇ ರಾಜೀನಾಮೆ ಪತ್ರ ಬರೆದ ಆರ್‌.ಶಂಕರ್‌, ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದರು.

ಶಂಕರ್‌ ಅವರು ಆಪರೇಷನ್‌ ಕಮಲದ ವೇಳೆ ಬಿಜೆಪಿ ಸೇರಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರನ್ನು ಪರಿಷತ್‌ ಸದಸ್ಯರನ್ನಾಗಿ ಮಾಡಲಾಗಿತ್ತು. ಆದ್ರೆ ಈ ಬಾರಿ ಅವರಿಗೆ ಟಿಕೆಟ್‌ ನಿರಾಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಮುಂದಿನ ನಡೆ ಬಗ್ಗೆ ಇನ್ನೂ ಯಾವುದೇ ಮಾಹಿತಿ ಇಲ್ಲ.

Share Post