BengaluruPolitics

ಅತಿ ಹೆಚ್ಚು ಅಶಿಸ್ತು ಹೊಂದಿರುವ ಪಕ್ಷ ಬಿಜೆಪಿ; ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಇಂದಿನಿಂದ ನೂತನ ಸರ್ಕಾರದ ಬಜೆಟ್‌ ಹಾಗೂ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಆದ್ರೆ ಇನ್ನೂ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ನಿನ್ನೆ ಬಿಜೆಪಿ ನಾಯಕರು ವಿಪಕ್ಷ ನಾಯಕರ ಆಯ್ಕೆಗೆ ಕಸರತ್ತು ಮಾಡಿದರಾದರೂ, ಸೂಕ್ತ ನಾಯಕನನ್ನು ಆಯ್ಕೆ ಮಾಡುವಲ್ಲಿ ವಿಫಲರಾಗಿದ್ದಾರೆ. ಈ ನಡುವೆ ಇದೇ ವಿಚಾರವನ್ನಿಟ್ಟುಕೊಂಡು ಕಾಂಗ್ರೆಸ್‌ ನಾಯಕರು ಲೇವಡಿ ಮಾಡುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನಮ್ಮದು ಶಿಸ್ತಿನ ಪಕ್ಷ ಅಂತ ಹೇಳಿಕೊಳ್ತಾರೆ. ಆದ್ರೆ ಬಿಜೆಪಿ ಅತಿ ಹೆಚ್ಚು ಅಶಿಸ್ತು ಇರುವ ಪಕ್ಷ ಎಂದು ಲೇವಡಿ ಮಾಡಿದರು.

ಬಿಜೆಪಿಯಲ್ಲಿ ಇದುವರೆಗೂ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಆಯ್ಕೆ ಮಾಡೋದು, ಬಿಡೋದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಆದ್ರೆ ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆ ಅನ್ನೋದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share Post