BengaluruPolitics

ಬಿಜೆಪಿ ಬಡವರ ವಿರೋಧಿ ಅನ್ನೋದು ಸಾಬೀತಾಯಿತು; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಬಿಜೆಪಿ ಪಕ್ಷ ಬಡವರ ವಿರೋಧಿ ಅನ್ನೋದು ಸಾಬೀತಾಯಿತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸಂಪುಟ ಸಭೆ ಬಳಿ ಮಾತನಾಡಿರುವ ಅವರು, ಅಕ್ಕಿ ವಿಚಾರದಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ದಾಸ್ತಾನಿದ್ದರೂ, ನಾವು ಹಣ ಕೊಡುತ್ತೇವೆ ಎಂದರೂ ಅಕ್ಕಿ ಪೂರೈಕೆ ಮಾಡುತ್ತಿಲ್ಲ. ಹೀಗಾಗಿ ಟೆಂಡರ್‌ ಕರೆದು ಅಕ್ಕಿ ಖರೀದಿ ಮಾಡಲು ನಾವು ನಿರ್ಧಾರ ಮಾಡಿದ್ದೇವೆ. ಅಲ್ಲಿಯವರೆಗೆ ತಾತ್ಕಾಲಿಕವಾಗಿ ಅಕ್ಕಿಗೆ ಬದಲಾಗಿ ಹಣ ನೀಡೋದಕ್ಕೆ ನಾವು ತೀರ್ಮಾನ ಮಾಡಿದ್ದೇವೆ. ಶೀಘ್ರದಲ್ಲೇ ಅಕ್ಕಿ ವ್ಯವಸ್ಥೆ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Share Post