BengaluruPolitics

ಸಿಎಂ ಕ್ಷೇತ್ರದವರೇ ಕಾಂಗ್ರೆಸ್‌ಗೆ ಬಂದಿದ್ದಾರೆ, ಫಲಿತಾಂಶ ಏನಾಗಬಹುದು..?; ಡಿಕೆಶಿ

ಬೆಂಗಳೂರು; ಮಾಜಿ ಸಂಸದ ಮುಂಜುನಾಥ್‌ ಕುನ್ನೂರ್‌ ಹಾಗೂ ಅವರ ಪುತ್ರ ರಾಜು ಕುನ್ನೂರ್‌ ಅವರು ಇಂದು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಇಬ್ಬರೂ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸ್ವತಃ ಸಿಎಂ ಕೇತ್ರದ ನಾಯಕರೇ ನಮ್ಮ ಜೊತೆ ಕೈ ಜೋಡಿಸಿದ್ದಾರೆ. ಹೀಗಿರುವ ಸಿಎಂ ಬೊಮ್ಮಾಯವರ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ ಫಲಿತಾಂಶ ಹೇಗಿರವುದು ನೀವೇ ಯೋಚನೆ ಮಾಡಿ ಎಂದು ಹೇಳಿದ್ದಾರೆ. ತವರು ಕ್ಷೇತ್ರದಲ್ಲೇ ಮುಖ್ಯಮಂತ್ರಿಗಳು ತಮ್ಮ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿರಲಿಲ್ಲ. ಉಳಿದ ಕ್ಷೇತ್ರಗಳ ಸ್ಥಿತಿ ಏನಾಗಬೇಡ ಎಂದು ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದರು.

Share Post